stat Counter



Thursday, February 5, 2015

ವರ್ಧಮಾನ ಪ್ರಶಸ್ತಿಗೆ ಪುಸ್ತಕ ಆಹ್ವಾನ -{ 2009 }


ಮೂಡುಬಿದಿರೆ: ಕಳೆದ 34 ವರ್ಷಗಳಿಂದ ವರ್ಧಮಾನ ಸಾಹಿತ್ಯ ಪ್ರಶಸ್ತಿಗಳನ್ನು ನೀಡುತ್ತಾ ಬಂದಿರುವ ಮೂಡುಬಿದಿರೆಯ ವರ್ಧಮಾನ ಸಾಹಿತ್ಯ ಪ್ರಶಸ್ತಿ ಪೀಠವು ಈ ಬಾರಿಯ ಪ್ರಶಸ್ತಿಗಾಗಿ 2009 ರಲ್ಲಿ ಪ್ರಥಮಾವತ್ತಿಯಾಗಿ ಪ್ರಕಟವಾದ ಕನ್ನಡ ಸಾಹಿತ್ಯದ ಯಾವುದೇ ಪ್ರಕಾರದ (ಕಾವ್ಯ, ಕಾದಂಬರಿ, ನಾಟಕ, ಸಣ್ಣಕತೆ, ವಿಮರ್ಶೆ ಇತ್ಯಾದಿ) ಸಾಹಿತ್ಯ ಕತಿಗಳನ್ನು ಪರಿಶೀಲನೆಗಾಗಿ ಆಹ್ವಾನಿಸಿದೆ.

ಪ್ರಶಸ್ತಿಯು ಗೌರವ ಸಂಭಾವನೆ, ಪ್ರಶಸ್ತಿ ಪತ್ರ, ಸನ್ಮಾನವನ್ನು ಒಳಗೊಂಡಿದೆ. ವರ್ಧಮಾನ ಸಾಹಿತ್ಯ ಪ್ರಶಸ್ತಿಯು ಹಿರಿಯ ಸಾಹಿತಿಗಳ ಕತಿಗೆ ಮೀಸಲಿದ್ದರೆ, ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯು ತಮ್ಮ ಮೊದಲನೆಯ , ಎರಡನೇ ಇಲ್ಲವೇ ಮೂರನೇ ಕತಿಯ ಮೂಲಕ ಮಹತ್ವದ್ದನ್ನು ಸಾಧಿಸಿದ ಹೊಸ ಪೀಳಿಗೆಯ ಸಾಹಿತಿಗಳಿಗೆ ಮೀಸಲಾಗಿದೆ. ಆಸಕ್ತರು ಮತ್ತು ಸಾಹಿತಿಗಳು ಕತಿಯ ಮೂರು ಪ್ರತಿಗಳನ್ನು ಕಳುಹಿಸಬೇಕು ಎಂದು ವರ್ಧಮಾನ ಪ್ರಶಸ್ತಿ ಪೀಠದ ಪ್ರಧಾನ ನಿರ್ದೇಶಕ ಡಾ.ನಾ.ಮೊಗಸಾಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:

Post a Comment