stat Counter



Showing posts with label gouri lankesh. Show all posts
Showing posts with label gouri lankesh. Show all posts

Wednesday, September 6, 2017

ಡಿ. ಉಮಾಪತಿ- ಯುವಪೀಳಿಗೆಯೊಂದಿಗೆ ಸಂವಾದಿಸುತ್ತಿದ್ದ ವಾತ್ಸಲ್ಯಮಯಿ

ಪ್ರಸನ್ನ - - ಸಿದ್ಧಾಂತಗಳು ಕೊಲೆಯಾಗುತ್ತಿವೆ...

ಉಡುಪಿಯಲ್ಲಿ ಗೌರಿ ಲಂಕೇಶ್ ಹತ್ಯೆಗೆ ಖಂಡನೆ - ರಾಜಶೇಖರ್ , ಫಣಿರಾಜ್

ದ್ವೇಷದ ವಾತಾವರಣಕ್ಕೆ ಗೌರಿ ಲಂಕೇಶ್ ಬಲಿ: ಜಿ.ರಾಜಶೇಖರ್

ಬಶೀರ್ . ಬಿ. ಎಮ್-- ಗೌರಿ ಲಂಕೇಶ್

ದಾರಿ ಹೋಕರು ಎಸೆದ ನೂರು 
ಕಲ್ಲುಗಳ ತಾಳಿಕೊಂಡು
ಹುಳಿ ಮಾವಿನ ಮರದಲ್ಲಿ ತೂಗುತ್ತಿರುವ
ಹಣ್ಣು
ಲಂಕೇಶರ ಕನಸುಗಳ
ಕಣ್ಣ ರೆಪ್ಪೆಯೊಳಗೆ ಜೋಪಾನ ಮಾಡಿ
ಕಾವು ಕೊಡುತ್ತಾ
ಎರಗುವ ಹದ್ದುಗಳ ಜೊತೆಗೆ
ಬೀದಿಗಿಳಿದು ಬಡಿದಾಡುತ್ತಾ
ಕೋರ್ಟು ಕಚೇರಿ ಎಂದು ಅಲೆದಾಡುತ್ತ
ಟೀಕೆ-ಟಿಪ್ಪಣಿಗಳ ಬಾಣಕ್ಕೆ ಎದೆಗೊಟ್ಟ
ಮುಸ್ಸಂಜೆ ಕಥಾ ಪ್ರಸಂಗದ ರಂಗವ್ವ
ಕೆಲವರ ಪಾಲಿಗೆ ಅಕ್ಕ
ಹಲವರ ಪಾಲಿಗೆ ಅವ್ವ
ಸಾವಂತ್ರಿ, ರಂಗವ್ವ, ಸುಭದ್ರೆ, ದೇವೀರಿ
ನೀಲು, ನಿಮ್ಮಿ... ಎಲ್ಲರೊಳಗೂ
ಚೂರು ಚೂರಾಗಿ ನೀವು...
ನಿಮ್ಮೊಳಗೆ ಲಂಕೇಶರು
ಹೊಸದಾಗಿ ಹುಟ್ಟಿದರು
ಪತ್ರಿಕೆ ನಿಮ್ಮನ್ನು ಸಿಗರೇಟಿನಂತೆ
ಸೇದುತ್ತಿದೆ...
ಪ್ರತಿವಾರ ಸುಡು ಕೆಂಡ
ವಿಷ ಹೀರಿದ ನಂಜುಂಡ
ಮಾತಿಲ್ಲದವರ ಪಾಲಿಗೆ
ಪತ್ರಿಕೆಯೇ ನಾಲಗೆ
ನಿರೀಕ್ಷೆ, ಸಮತೆಯ ನಾಳೆಗೆ
ಇಂದು ನಿಮಗೆ ಹುಟ್ಟಿದ ದಿನ
ನಾಡು, ನುಡಿಯನ್ನು ನೀವು ಮುಟ್ಟಿದ ದಿನ